ಬಟ್ಟ ಬಯಲಿನಂತಲ್ಲ ಮಲೆನಾಡು. ಇಲ್ಲಿನ ಜಡಿಗುಟ್ಟಿ ಸುರಿವ ಮಳೆಯ ರುದ್ರ ನರ್ತನ, ಮೊಗೆವ ಹಸಿರಿನ ಮೇಲೆ ಹಾಸುವ ಮಂಜು, ಬೆಟ್ಟ-ಗುಡ್ಡಗಳ ಮೇಲಿನ ಎಳೆಬಿಸಿಲ ಚೇತೋಹಾರಿ ನೋಟ, ಹನ್ನೆರಡು ತಿಂಗಳ ವೈವಿಧ್ಯಮಯವಾದ ಪ್ರಕೃತಿ ಸೌಂದರ್ಯ ಇನ್ನೆಲ್ಲೂ ಸಿಗದು. ಭತ್ತ, ಏಲಕ್ಕಿ, ಕಾಫಿ, ಕಿತ್ತಳೆ, ಕಾಳುಮೆಣಸಿನ ಪರಿಮಳದ ಇಲ್ಲಿನ ಸಂಘರ್ಷದ ಬದುಕಿನ ಜೊತೆಗೆ ತುಳುಕು ಹಾಕಿಕೊಂಡ ಪ್ರಾಣಿ-ಪಕ್ಷಿಗಳ ಚಿತ್ರ ವಿಚಿತ್ರ ಘಟನೆಗಳು ಕೂಡ ಬೆರುಗ ಹುಟ್ಟಿಸುವಂಥದ್ದೇ. ಹಾವು-ಮುಂಗುಸಿ ವೈರ, ದೈತ್ಯ ಆನೆಯ ಶಕ್ತಿಪ್ರದರ್ಶನ, ಹೆಜ್ಜೇನುಗಳ ಮಾರಕ ದಾಳಿ, ಮೊಸಳೆ ಭಯ, ಕಳ್ಳಭಟ್ಟಿಯ ದುರಂತ, ಕೃಷಿಕನ ಕಷ್ಟ-ನಷ್ಟಗಳು, ಹಾದರದ ವ್ಯಥೆ, ಎಲ್ಲದರಲ್ಲಿಯೂ ಅವುಗಳದ್ದೇ ಆದ ರೋಚಕತೆ ಇದೆ. ಮಲೆನಾಡಿಗೆ ಸಾಟಿ ಮಲೆನಾಡು ಮಾತ್ರ! ಅನುಭವ ಇಲ್ಲದವರು ಅದನ್ನು ಓದಿಯೂ ಅನುಭವಿಸಬಹುದು.
ಬಟ್ಟ ಬಯಲಿನಂತಲ್ಲ ಮಲೆನಾಡು. ಇಲ್ಲಿನ ಜಡಿಗುಟ್ಟಿ ಸುರಿವ ಮಳೆಯ ರುದ್ರ ನರ್ತನ, ಮೊಗೆವ ಹಸಿರಿನ ಮೇಲೆ ಹಾಸುವ ಮಂಜು, ಬೆಟ್ಟ-ಗುಡ್ಡಗಳ ಮೇಲಿನ ಎಳೆಬಿಸಿಲ ಚೇತೋಹಾರಿ ನೋಟ, ಹನ್ನೆರಡು ತಿಂಗಳ ವೈವಿಧ್ಯಮಯವಾದ ಪ್ರಕೃತಿ ಸೌಂದರ್ಯ ಇನ್ನೆಲ್ಲೂ ಸಿಗದು. ಭತ್ತ, ಏಲಕ್ಕಿ, ಕಾಫಿ, ಕಿತ್ತಳೆ, ಕಾಳುಮೆಣಸಿನ ಪರಿಮಳದ ಇಲ್ಲಿನ ಸಂಘರ್ಷದ ಬದುಕಿನ ಜೊತೆಗೆ ತುಳುಕು ಹಾಕಿಕೊಂಡ ಪ್ರಾಣಿ-ಪಕ್ಷಿಗಳ ಚಿತ್ರ ವಿಚಿತ್ರ ಘಟನೆಗಳು ಕೂಡ ಬೆರುಗ ಹುಟ್ಟಿಸುವಂಥದ್ದೇ. ಹಾವು-ಮುಂಗುಸಿ ವೈರ, ದೈತ್ಯ ಆನೆಯ ಶಕ್ತಿಪ್ರದರ್ಶನ, ಹೆಜ್ಜೇನುಗಳ ಮಾರಕ ದಾಳಿ, ಮೊಸಳೆ ಭಯ, ಕಳ್ಳಭಟ್ಟಿಯ ದುರಂತ, ಕೃಷಿಕನ ಕಷ್ಟ-ನಷ್ಟಗಳು, ಹಾದರದ ವ್ಯಥೆ, ಎಲ್ಲದರಲ್ಲಿಯೂ ಅವುಗಳದ್ದೇ ಆದ ರೋಚಕತೆ ಇದೆ. ಮಲೆನಾಡಿಗೆ ಸಾಟಿ ಮಲೆನಾಡು ಮಾತ್ರ! ಅನುಭವ ಇಲ್ಲದವರು ಅದನ್ನು ಓದಿಯೂ ಅನುಭವಿಸಬಹುದು.