ಕವಯತ್ರಿ ಕಾವ್ಯಾ ಕಡಮೆ ಅವರ ’ ಮಾಕೋನ ಏಕಾಂತ’ ಕೃತಿಯು ಕತಾಸಂಕಲನವಾಗಿದೆ. ಈ ಸಂಕಲನದಲ್ಲಿ ಒಟ್ಟು ಎಂಟು ಕತೆಗಳಿವೆ. ಕೃತಿಗೆ ಮುನ್ನುಡಿ ಬರೆದಿರುವ ಟಿ.ಪಿ ಅಶೋಕ್ ಅವರು, ‘ಭಿನ್ನ ಸಾಂಸ್ಕೃತಿಕ ಆವರಣಗಳಲ್ಲಿ ಅರಳಿರುವ ಈ ಕತೆಗಳು ಅನುಭವದ ತಾಜಾತನದಿಂದ, ಲವಲವಿಕೆಯ ನಿರೂಪಣೆಯಿಂದ, ಪ್ರಬುದ್ಧ ನಿರ್ವಹಣೆಯಿಂದ ಮನಮುಟ್ಟುತ್ತವೆ. ತೀರ್ಪು ಕೊಡುವ ಆತುರಕ್ಕೆ ಬೀಳದೆ ಮನುಷ್ಯ ಸ್ವಭಾವ ಮತ್ತು ಸಂಬಂಧಗಳ ಹಲವು ಆಯಾಮಗಳನ್ನು ಮುಕ್ತವಾಗಿ, ಸೂಕ್ಷ್ಮವಾಗಿ ಪರಿಶೀಲಿಸಿಕೊಳ್ಳುವ ವ್ಯವಧಾನ, ಉದಾರತೆ ಇಲ್ಲಿ ಕಾಣುತ್ತವೆ. ಜೀವನ ವೈಶಾಲ್ಯ-ವೈವಿಧ್ಯಗಳ ಬಗ್ಗೆ ಲೇಖಕಿ ಉಳಿಸಿಕೊಂಡಿರುವ ಬೆರಗು ಈ ಕತೆಗಳ ಸ್ಥಾಯೀ ಭಾವವಾಗಿದೆ.
ಸಿದ್ಧ ಜಾಡನ್ನು ಬಿಟ್ಟು ಹೊಸ ಹೊಸ ಲೋಕಗಳನ್ನು ಅನ್ವೇಷಿಸುವ ದಿಟ್ಟತನ, ಕಾವ್ಯಕ್ಕೆ ಸಮೀಪವೆನ್ನಿಸುವಂತಹ ಭಾಷಾ ಬಳಕೆ, ಕತೆಗಿಂತ ಕಥನಕ್ಕೆ ನೀಡಿರುವ ಪ್ರಾಮುಖ್ಯತೆಗಳಿಂದಾಗಿ ಈ ಬರಹಗಳು ವಿಶಿಷ್ಟವಾಗಿವೆ. ಕನ್ನಡೇತರ ಪರಿಸರಗಳಲ್ಲಿ ಸೃಷ್ಟಿಯಾಗುವ ಅನುಭವಗಳನ್ನು ಕನ್ನಡ ಭಾಷೆಯಲ್ಲಿ ಗ್ರಹಿಸಿ-ಅಭಿವ್ಯಕ್ತಿಸುವ ಮೂಲಕ ಕನ್ನಡ ಓದುಗರ ಭಾವಲೋಕಗಳನ್ನು ಹಿಗ್ಗಿಸುವಲ್ಲಿ ಲೇಖಕಿ ಸಾಕಷ್ಟು ಯಶಸ್ವಿಯಾಗಿದ್ದಾರೆ. ಈ ಕತೆಗಳನ್ನು ಓದುತ್ತಿದ್ದಂತೆ ಹೊಸದೇನನ್ನೋ ಅನುಸಂಧಾನ ಮಾಡುತ್ತಿರುವ ಅನುಭವವಾಗುತ್ತದೆ’ ಎಂದಿದ್ದಾರೆ.
ಕವಯತ್ರಿ ಕಾವ್ಯಾ ಕಡಮೆ ಅವರ ’ ಮಾಕೋನ ಏಕಾಂತ’ ಕೃತಿಯು ಕತಾಸಂಕಲನವಾಗಿದೆ. ಈ ಸಂಕಲನದಲ್ಲಿ ಒಟ್ಟು ಎಂಟು ಕತೆಗಳಿವೆ. ಕೃತಿಗೆ ಮುನ್ನುಡಿ ಬರೆದಿರುವ ಟಿ.ಪಿ ಅಶೋಕ್ ಅವರು, ‘ಭಿನ್ನ ಸಾಂಸ್ಕೃತಿಕ ಆವರಣಗಳಲ್ಲಿ ಅರಳಿರುವ ಈ ಕತೆಗಳು ಅನುಭವದ ತಾಜಾತನದಿಂದ, ಲವಲವಿಕೆಯ ನಿರೂಪಣೆಯಿಂದ, ಪ್ರಬುದ್ಧ ನಿರ್ವಹಣೆಯಿಂದ ಮನಮುಟ್ಟುತ್ತವೆ. ತೀರ್ಪು ಕೊಡುವ ಆತುರಕ್ಕೆ ಬೀಳದೆ ಮನುಷ್ಯ ಸ್ವಭಾವ ಮತ್ತು ಸಂಬಂಧಗಳ ಹಲವು ಆಯಾಮಗಳನ್ನು ಮುಕ್ತವಾಗಿ, ಸೂಕ್ಷ್ಮವಾಗಿ ಪರಿಶೀಲಿಸಿಕೊಳ್ಳುವ ವ್ಯವಧಾನ, ಉದಾರತೆ ಇಲ್ಲಿ ಕಾಣುತ್ತವೆ. ಜೀವನ ವೈಶಾಲ್ಯ-ವೈವಿಧ್ಯಗಳ ಬಗ್ಗೆ ಲೇಖಕಿ ಉಳಿಸಿಕೊಂಡಿರುವ ಬೆರಗು ಈ ಕತೆಗಳ ಸ್ಥಾಯೀ ಭಾವವಾಗಿದೆ.
ಸಿದ್ಧ ಜಾಡನ್ನು ಬಿಟ್ಟು ಹೊಸ ಹೊಸ ಲೋಕಗಳನ್ನು ಅನ್ವೇಷಿಸುವ ದಿಟ್ಟತನ, ಕಾವ್ಯಕ್ಕೆ ಸಮೀಪವೆನ್ನಿಸುವಂತಹ ಭಾಷಾ ಬಳಕೆ, ಕತೆಗಿಂತ ಕಥನಕ್ಕೆ ನೀಡಿರುವ ಪ್ರಾಮುಖ್ಯತೆಗಳಿಂದಾಗಿ ಈ ಬರಹಗಳು ವಿಶಿಷ್ಟವಾಗಿವೆ. ಕನ್ನಡೇತರ ಪರಿಸರಗಳಲ್ಲಿ ಸೃಷ್ಟಿಯಾಗುವ ಅನುಭವಗಳನ್ನು ಕನ್ನಡ ಭಾಷೆಯಲ್ಲಿ ಗ್ರಹಿಸಿ-ಅಭಿವ್ಯಕ್ತಿಸುವ ಮೂಲಕ ಕನ್ನಡ ಓದುಗರ ಭಾವಲೋಕಗಳನ್ನು ಹಿಗ್ಗಿಸುವಲ್ಲಿ ಲೇಖಕಿ ಸಾಕಷ್ಟು ಯಶಸ್ವಿಯಾಗಿದ್ದಾರೆ. ಈ ಕತೆಗಳನ್ನು ಓದುತ್ತಿದ್ದಂತೆ ಹೊಸದೇನನ್ನೋ ಅನುಸಂಧಾನ ಮಾಡುತ್ತಿರುವ ಅನುಭವವಾಗುತ್ತದೆ’ ಎಂದಿದ್ದಾರೆ.